ಮಡಿಕೇರಿ, ಜೂ. 7: ಮಡಿಕೇರಿ ತಾಲೂಕಿನ ಚೆಟ್ಟಿಮಾನಿ-ಕಲ್ಲುಗುಂಡಿ-ದಬ್ಬಡ್ಕ ರಸ್ತ್ತೆಗೆ ಸಂಪರ್ಕ ಕಲ್ಪಿಸುವ 1.27 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು.

ಚೆಂಬು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಗಮಹರಿಸಲಾಗಿದೆ. ಜಿಲ್ಲೆಯ ಗ್ರಾಮೀಣ ರಸ್ತೆಗಳಿಗೆ ಪೂರಕ ವಾಗಿ ಹೆಚ್ಚಿನ ಅನುದಾನ ಬಳಕೆ ಯಾಗುವಲ್ಲಿ ಕ್ರಮ ವಹಿಸಲಾಗುವದು ಎಂದು ಸಚಿವರು ಹೇಳಿದರು.

ಪ್ರಸಕ್ತ ಸಾಲಿನಲ್ಲಿ 50 ಕೋಟಿಯ ವಿಶೇಷ ಅನುದಾನವನ್ನು ನೀಡ¯ Áಗಿದ್ದು, ಇದರಲ್ಲಿ ಹೆಚ್ಚಿನ ಪಾಲು ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮೀಸಲಿಡ ಲಾಗಿದೆ. ಅದರಂತೆ ಜನರ ಬೇಡಿಕೆಗೆ ಅನುಗುಣವಾಗಿ ಕಾಮಾಗಾರಿ ಕೈಗೊಳ್ಳಲಾಗುವದು ಎಂದು ಸಚಿವರು ತಿಳಿಸಿದರು.

ಗ್ರಾಮೀಣ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಒತ್ತು ನೀಡಲಾಗಿದೆ, ಹಾಗೂ ಪ್ರವಾಸೋದ್ಯಮ, ನೀರಾವರಿ ನಿಗಮಗಳ

(ಮೊದಲ ಪುಟದಿಂದ) ಜೊತೆಗೂಡಿ ರಸ್ತೆ, ಸೇತುವೆ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಚೆಂಬು ಗ್ರಾಮ ಪಂಚಾಯಿತಿಯಲ್ಲಿ ಚೆಟ್ಟಿಮಾನಿ-ಕಲ್ಲುಗುಂಡಿ-ದಬ್ಬಡ್ಕ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣವಾಗಿ ಸಾರ್ವಜನಿಕರಿಗೆ ಸಮರ್ಪಿಸಲಾಗಿದೆ. ಸೇತುವೆ ನಿರ್ಮಾಣದಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಿದೆ, ಮುಂದಿನ ದಿನಗಳಲ್ಲಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಕಲ್ಲುಗುಂಡಿ, ಡಬ್ಬಡ್ಕ ಹಾಗೂ ಚೆಟ್ಟಿಮಾನಿ ಮಾರ್ಗವಾಗಿ ಭಾಗಮಂಡಲಕ್ಕೆ ಸುಗಮ ರಸ್ತೆ ವ್ಯವಸ್ಥೆಯನ್ನು ಮಾಡುವಂತಾಗಬೇಕು. ಇದರಿಂದ ಕೊಡಗಿನ ಗಡಿ ಭಾಗದ ಜನರ ಸಮಸ್ಯೆಗೂ ಸ್ಪಂದನ ನೀಡುವಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಮಾದವ, ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ, ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಬಾಲಚಂದ್ರ ಕಳಗಿ, ಸುಬ್ರಮಣ್ಯ ಉಪಾಧ್ಯಾಯ, ಪ್ರಮುಖರಾದ ಟಿ.ಪಿ.ರಮೇಶ್, ಬಿ.ಟಿ. ಪ್ರದೀಪ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎಂ.ಜೆ. ಕಾಂತರಾಜು, ಎಇಇ ಸತ್ಯನಾರಾಯಣ, ನಬಾರ್ಡ್ ಯೋಜನಾಧಿಕಾರಿ ಮುಂಡಂಡ ಸಿ.ನಾಣಯ್ಯ ಮತ್ತಿತರರು ಇದ್ದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವರು ಸಂಪಾಜೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯರು ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಡೆಂಗ್ಯೂ ಸಮಸ್ಯೆ ಸಾಕಷ್ಟಿದ್ದು, ಈ ಬಗ್ಗೆ ಅಗತ್ಯ ವೈದ್ಯಕೀಯ ಸೌಲಭ್ಯ ಅಗತ್ಯವಿದೆ ಎಂದು ಸಚಿವರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಡೆಂಗ್ಯೂ ಜ್ವರದ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಗ್ರಾಮ ಮಟ್ಟದಲ್ಲಿ ಆಗಬೇಕು. ಈಗಾಗಲೇ ವೈದ್ಯರ ನೇಮಕಾತಿಗಾಗಿ ಕೌನ್ಸೆಲಿಂಗ್ ನಡೆಯುತ್ತಿದ್ದು, ತಾತ್ಕಾಲಿವಾಗಿ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಿಸುವಲ್ಲಿ ಅಗತ್ಯ ಕ್ರಮ ವಹಿಸಲಾಗುವದು ಎಂದರು. ಈ ಸಂದರ್ಭ ತಾಲೂಕು ವೈದ್ಯಾಧಿಕಾರಿ ರವಿಕುಮಾರ್, ಸ್ಥಳಿಯರಾದ ಮಾಧವ, ಸುರೇಶ್ ಮತ್ತಿತರರು ಇದ್ದರು.