ಸೋಮವಾರಪೇಟೆ, ಜು. 25: ಇತ್ತೀಚೆಗೆ ಗುಜರಾತ್ ರಾಜ್ಯದಲ್ಲಿ ದಲಿತ ಯುವಕರನ್ನು ವಾಹನಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆ ಹಾಗೂ ಬಿಎಸ್‍ಪಿ ಅಧ್ಯಕ್ಷೆ ಮಾಯಾವತಿ ಯವರಿಗೆ ಉತ್ತರ ಪ್ರದೇಶದ ಬಿಜೆಪಿ ಪ್ರಮುಖರು ಅವಹೇಳನ ಮಾಡಿದ ಕೃತ್ಯವನ್ನು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕ ಜೆ.ಆರ್. ಪಾಲಾಕ್ಷ ಖಂಡಿಸಿದ್ದು, ಕೂಡಲೇ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.