ಕುಶಾಲನಗರ, ಆ. 22: ಇಲ್ಲಿನ ಕನ್ನಿಕಾ ವಿವಿದೋದ್ದೇಶ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ 14ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿ ಗಳಿಗೆ ಜೀವನ ಮಾಹಿತಿ ಕಾರ್ಯಾಗಾರ ಸ್ಥಳೀಯ ವಾಸವಿ ಮಹಲ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಪ್ರಾಂಶುಪಾಲ ಗುರುಮಲ್ಲಪ್ಪ, ಅಶೋಕ್ ಕುಮಾರ್ ಹಾಗೂ ನವೀನ್ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.

ಆರ್ಯವೈಶ್ಯ ಮಂಡಳಿ ಮಾಜಿ ಅಧ್ಯಕ್ಷ ಕೆ. ಜೆ. ಪಾಂಡುರಂಗ ಶೆಟ್ಟಿ ಕಾರ್ಯಾಗಾರವನ್ನು ಉದ್ಘಾಟಿಸಿ ದರು. ಸಂಘದ ಅಧ್ಯಕ್ಷ ಕೆ.ಆರ್. ರವಿಕುಮಾರ್, ಕಾರ್ಯಕ್ರಮ ಸಂಯೋಜಕ ಪಿ.ಡಿ. ಪ್ರಶಾಂತ್, ವಾಸವಿ ಯುವಜನ ಸಂಘದ ಅಧ್ಯಕ್ಷ ವಿ.ಆರ್. ಮಂಜುನಾಥ್, ಮಹಿಳಾ ಮಂಡಳಿ ಅಧ್ಯಕ್ಷೆ ಆಶಾ ಅಶೋಕ್, ಪ್ರಮುಖರಾದ ಚಿತ್ರಾ ರಮೇಶ್, ಕೆ.ಜೆ. ಸತೀಶ್ ಮತ್ತಿತರರು ಇದ್ದರು.