ಮಡಿಕೇರಿ, ಜೂ. 27: ಶಾಲಾ ಮಕ್ಕಳನ್ನು ಕರೆದೊಯ್ಯುವಾಗ ಆಟೋ ರಿಕ್ಷಾಗಳಲ್ಲಿ ಕನಿಷ್ಟ 8 ಮಕ್ಕಳನ್ನು ಕರೆದೊಯ್ಯಲು ಅವಕಾಶ ನೀಡಬೇಕೆಂದು ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ ಆರ್‍ಟಿಓ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ದಿಢೀರಾಗಿ 6 ಮಕ್ಕಳನ್ನು ಮಾತ್ರ ಕರೆದೊಯ್ಯುವಂತೆ ಆರ್‍ಟಿಓ ಅಧಿಕಾರಿಗಳು ಆದೇಶಿಸಿರುವದರಿಂದ ಆಟೋ ಚಾಲಕರು ದುಪ್ಪಟ್ಟು ದರ ವಸೂಲು ಮಾಡುತ್ತಿದ್ದಾರೆ. ತಿಂಗಳಿಗೆ ರೂ. 400 ಇದ್ದುದನ್ನು ಏಕಾಏಕಿ 800ಕ್ಕೆ ಏರಿಸಲಾಗಿದೆ. ಇದರಿಂದ ಪೋಷಕರಿಗೆ ಭಾರೀ ಹೊರೆಯಾಗುತ್ತಿದೆ. ಹಾಗಾಗಿ 8 ಮಕ್ಕಳಿಗೆ ಅವಕಾಶ ನೀಡಿದರೆ ಪೋಷಕರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.