ಸೋಮವಾರಪೇಟೆ, ಆ. 16: ಗುಡ್ಡೆಹೊಸೂರಿನಲ್ಲಿ ನಡೆದ ಆಟೋ ಚಾಲಕನ ಹತ್ಯೆ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸೋಮವಾರಪೇಟೆ ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.

ಗುಡ್ಡೆಹೊಸೂರು ನಿವಾಸಿ ಆಟೋ ಚಾಲಕ ಪ್ರವೀಣ್ ಪೂಜಾರಿ ಅವರನ್ನು ಹತ್ಯೆಗೈದಿರುವ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಮೃತರ ಕುಟುಂಬಕ್ಕೆ ನ್ಯಾ ದೊರಕಿಸಿಕೊಡಬೇಕೆಂದು ಸಂಘದ ಅಧ್ಯಕ್ಷ ಮೋಹನ್ ಆಗ್ರಹಿಸಿದ್ದಾರೆ.

ಮೃತ ಪ್ರವೀಣ್ ಅವರ ನಿಧನ ಹಿನ್ನೆಲೆ ಸೋಮವಾರಪೇಟೆ ನಗರದಲ್ಲಿ ಒಂದು ಗಂಟೆಗಳ ಕಾಲ ಆಟೋ ಸಂಚಾರ ಸ್ಥಗಿತಗೊಳಿಸಿ, ನಿಲ್ದಾಣದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಮೌನಾಚರಿಸಲಾಯಿತು. ಈ ಸಂದರ್ಭ ಉಪಾಧ್ಯಕ್ಷ ಮಂಜು, ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಗಂಗಾಧರ್, ಸಹ ಕಾರ್ಯದರ್ಶಿ ಬಿ.ಜಿ. ರವಿ, ಖಜಾಂಚಿ ಬೇಟು ಸೇರಿದಂತೆ ಇತರರು ಹಾರಿದ್ದರು.