ಚೆಟ್ಟಳ್ಳಿ, ಜೂ. 26: ಚೆಟ್ಟಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ ವೈದ್ಯಾಧಿಕಾರಿ ಡಾ. ಕೆ.ಯಂ. ಗಿರೀಶ್ ಅವರ ನೇತೃತ್ವದಲ್ಲಿ ನೆರವೇರಿತು.

ಚೆಟ್ಟಳ್ಳಿ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸ್ವಚ್ಛತಾ ಕಾರ್ಯಕ್ರಮದಡಿ ಆರೋಗ್ಯ ಕೇಂದ್ರದ ಸುತ್ತಲಿನ ಕಾಡುಗಳನ್ನು ಕಡಿದು ಸ್ವಚ್ಛ ಮಾಡಿದರು.

ಹಿರಿಯ ಆರೋಗ್ಯ ಸಹಾಯಕಿ ಅಂಜಲೀನ, ಕಿರಿಯ ಆರೋಗ್ಯ ಸಹಾಯಕಿಯರಾದ ವಿಕ್ಟೋರಿಯ, ಲಕ್ಷ್ಮಿ, ಮಾಯಮ್ಮ, ಪುಪ್ಪಾವತಿ, ಗೀತಾ ಮತ್ತು ಆಶಾ ಕಾರ್ಯಕರ್ತೆಯರು ಭಾವಹಿಸಿದ್ದರು.