ಮಡಿಕೇರಿ, ಅ. 31: ಜಿಲ್ಲಾಡಳಿತ ವತಿಯಿಂದ ತಾ. 1 ರಂದು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.

ಇಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ಜಿ.ಪಂ.ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕೆÀ್ಷ ಕಾವೇರಮ್ಮ ಸೋಮಣ್ಣ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಇತರರು ಭಾಗವಹಿಸಲಿದ್ದಾರೆ.

ಸಂಜೆ 4.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.