ಮಡಿಕೇರಿ, ಅ.30 : ದೇಶದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ 32 ನೇ ಪುಣ್ಯತಿಥಿ ಪ್ರಯುಕ್ತ ಸಂಸ್ಮರಣಾ ದಿನ ಹಾಗೂ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಕೆಳಗಿನ ಕೊಡವ ಸಮಾಜದಲ್ಲಿ ತಾ.31 ರಂದು (ಇಂದು) ನಡೆಯಲಿದೆ.

ಬೆಳಿಗ್ಗೆ 11 ಗಂಟೆಗೆ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಕಾರ್ಯಕ್ರಮವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ವಸತಿ ಸಚಿವ ಎಂ. ಕೃಷ್ಣಪ್ಪ, ಮಾಜಿ ಸಂಸದ ಅಡಗೂರು ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ ವೀಣಾ ಅಚ್ಚಯ್ಯ, ಮಾಜಿ ಸಚಿವರಾದ ಟಿ.ಜಾನ್, ಸುಮಾವಸಂತ್, ರಾಣಿ ಸತೀಶ್, ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿ ಹುಸೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಮಾಜಿ ಶಾಸಕರಾದ ಕೆ.ಎಂ.ಇಬ್ರಾಹಿಂ, ಹೆಚ್.ಡಿ. ಬಸವರಾಜು, ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಬಿ.ಟಿ.ಪ್ರದೀಪ್, ಪ್ರಮುಖರಾದ ಪದ್ಮಿನಿ ಪೊನ್ನಪ್ಪ, ಕೆ.ಎಂ.ಲೋಕೇಶ್ ಚಂದ್ರಮೌಳಿ, ಜಮ್ಮಡ ಕರುಂಬಯ್ಯ, ಬ್ಲಾಕ್ ಕಾಂಗ್ರೆಸ್ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಪಾಲ್ಗೊಳ್ಳ ಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‍ನ ಪ್ರಭಾರ ಅಧ್ಯಕ್ಷ ಟಿ.ಪಿ.ರಮೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.