ಮಡಿಕೇರಿ, ಜೂ. 10: 2015-16ನೇ ಸಾಲಿನಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ. 97 ರಷ್ಟು ಫಲಿತಾಂಶ ಪಡೆದಿರುವ ಹಿನ್ನೆಲೆಯಲ್ಲಿ ಹಾಕತ್ತೂರು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರುಗಳಿಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ತಾ. 11 ರಂದು (ಇಂದು) ಮಧ್ಯಾಹ್ನ 12 ಗಂಟೆಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.