ಮಡಿಕೇರಿ, ಜೂ. 27: ಸುಂಟಿಕೊಪ್ಪ-ಮಾದಾಪುರ ರಸ್ತೆಯಲ್ಲಿರುವ ಪವಿತ್ರಾ ಎಂಬವರ ಮೊಬೈಲ್ ಶಾಪ್‍ನಿಂದ ಸುಮಾರು 90 ಸಾವಿರ ಮೌಲ್ಯದ ಮೊಬೈಲ್ ಮತ್ತು ಹಣ ಕಳವಾಗಿರುವ ಬಗ್ಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಮತ್ತು ಕಳವು ಮಾಲೀನ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶ ನದಲ್ಲಿ ಆರೋಪಿಗಳಾದ ಹೊಸ ಬೀಡುವಿನ ಮಂಜು, ಕಿರಗಂದೂರು ವಿನ ಬಿ.ಎಸ್. ಪ್ರದೀಪ್ ಎಂಬವರನ್ನು ಕುಶಾಲನಗರ ಮತ್ತು ಸೋಮವಾರಪೇಟೆಯಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಡಿಸಿಐಬಿ ಬಿ.ಆರ್. ಲಿಂಗಪ್ಪ, ಸಿಬ್ಬಂದಿಗಳಾದ ಎನ್.ಟಿ. ತಮ್ಮಯ್ಯ, ವಿ.ಜಿ. ವೆಂಕಟೇಶ್, ಕೆ.ಎಸ್. ಅನಿಲ್ ಕುಮಾರ್, ಬಿ.ಎಲ್. ಯೋಗೇಶ್ ಕುಮಾರ್, ಎಂ.ಎನ್. ನಿರಂಜನ್, ಕೆ.ಆರ್. ವಸಂತ, ಕೆ.ಎಸ್. ಶಶಿಕುಮಾರ್, ಸುನಿಲ್, ಜೋಶ್ ನಿಶಾಂತ್ ಮತ್ತು ಸೋಮವಾರಪೇಟೆ ಪೊಲೀಸ್ ಠಾಣೆಯ ಸಂದೇಶ್ ಕುಮಾರ್ ಪಾಲ್ಗೊಂಡಿದ್ದರು.