ನಾಪೆÇೀಕ್ಲು, ಅ. 31: ನಾಪೆÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರದಿಂದ ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ತೆರಳುವ ರಸ್ತೆ ಕಾಂಕ್ರೀಟಿರಣಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಭೂಮಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ಈ ರಸ್ತೆಯು ತೀರಾ ಹದಗೆಟ್ಟಿದ್ದು, ಜನ ಸಂಚಾರಕ್ಕೆ ಕೂಡಾ ತೊಂದರೆಯಾಗಿರುವ ಹಿನ್ನಲೆಯಲ್ಲಿ ರಸ್ತೆ ಅಭಿವೃದ್ಧಿಗಾಗಿ ಶಾಸಕ ಕೆ.ಜಿ.ಬೋಪಯ್ಯ ಅವರ ನಿಧಿಯಿಂದ ರೂ. 2 ಲಕ್ಷ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅನುದಾನದಲ್ಲಿ ತಲಾ ರೂ. 1 ಲಕ್ಷ ಸೇರಿ ಒಟ್ಟು ರೂ. 4 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ನೆರೆಯಂಡಮ್ಮಂಡ ಉಮಾ ಪ್ರಭು, ಸ್ಥಳೀಯರಾದ ಅಲ್ಲಾರಂಡ ರಾಣಿ, ಗಣೇಶ್, ನಾಸಿರ್, ರಫೀಕ್, ರಾಣಿ ಸುಬ್ರಮಣಿ, ರೇಖಾ ಗಣೇಶ್, ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರ ಸುಬ್ಬಯ್ಯ ಮತ್ತಿತರರು ಇದ್ದರು.