ಕೂಡಿಗೆ, ಜೂ. 11: ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ ಆಯಾ ವಾರ್ಡ್ ಕಾಮಗಾರಿ ಹಾಗೂ 14ನೇ ಹಣಕಾಸಿನ ಕ್ರಿಯಾ ಯೋಜನೆಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಮಾತನಾಡಿ, ಗ್ರಾಮ ಪಂಚಾಯಿತಿ ಸದಸ್ಯರುಗಳ ಸಲಹೆ-ಸೂಚನೆಗಳನ್ನು ಪಡೆದು ಎಲ್ಲಾ ವಾರ್ಡ್‍ಗಳಿಗೆ ಮೂಲಭೂತ ಸೌಲಭ್ಯ ಒದಗಿಸುವ ಬಗ್ಗೆ ಪ್ರಯತ್ನಿಸಲಾಗುವದು ಎಂದರು.

ಈ ಸಂದರ್ಭ ಅಭಿವೃದ್ಧಿ ಅಧಿಕಾರಿ ಸುಮೇಶ್ ಕ್ರಿಯಾ ಯೋಜನೆ ಮತ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಹಾಗೂ ಬಾಕಿ ಉಳಿದಿರುವ ಶೌಚಾಲಯಗಳನ್ನು ನಿರ್ಮಾಣಗೊಳಿಸುವದರ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಸಣ್ಣಪ್ಪ ಸೇರಿದಂತ ಸದಸ್ಯರುಗಳು ಹಾಜರಿದ್ದರು.