ಮಡಿಕೇರಿ, ಅ. 24: ಯುವ ಜನಾಂಗ ಕೃಷಿಯತ್ತ ಒಲವು ತೋರಿದರೆ ದೇಶ ಸುಭೀಕ್ಷವಾಗುವದರಲ್ಲಿ ಸಂದೇಹವಿಲ್ಲವೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ತಿಳಿಸಿದರು. ಕೃಷಿ ಇಲಾಖೆ ವತಿಯಿಂದ ಮದೆ ಗ್ರಾಮದಲ್ಲಿ ನಡೆದ “ಕೃಷಿ ಅಭಿಯಾನ” ಕಾರ್ಯಕ್ರಮದಲ್ಲಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಕೃಷಿ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳನ್ನು ಬಳಸಿಕೊಂಡು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ತಾಲೂಕು ಪಂಚಾಯ್ತಿ ಅಧ್ಯಕೆÀ್ಷ ತೆಕ್ಕಡೆ ಶೋಭಾ ಮೋಹನ್ ಹೇಳಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಯಾಲದಾಳು ಪದ್ಮಾವತಿ, ಕವಿತಾ ಪ್ರಭಾಕರ್, ತಾಲೂಕು ಪಂಚಾಯಿತಿ ಸದಸೆÀ್ಯ ತುಂತಜೆ ಕುಮುದಾ, ಮದೆ ಸಹಕಾರ ಸಂಘದ ಅಧ್ಯಕ್ಷ ಕಿಮ್ಮುಡಿರ ಜಗದೀಶ್ ಮಾತನಾಡಿದರು.

ತಾಂತ್ರಿಕ ಸಮಾವೇಶದಲ್ಲಿ ಉಪ ಕೃಷಿ ನಿರ್ದೇಶಕ ಕೆ.ರಾಜು, ನಬಾರ್ಡ್ ಪ್ರಬಂಧಕ ಎಂ.ಸಿ. ನಾಣಯ್ಯ, ಗೋಣಿಕೊಪ್ಪ ಕೆ.ವಿ.ಕೆ. ತಜ್ಞ ವೀರೇಂದ್ರ ಕುಮಾರ್, ತೋಟಗಾರಿಕಾ ಇಲಾಖೆ ತಜ್ಞರಾದ ಬಿ.ಸಿ. ನಾಚಪ್ಪ ಭಾಗವಹಿಸಿ ರೈತರಿಗೆ ಅಗತ್ಯ ಮಾಹಿತಿ ನೀಡಿದರು. ರೈತರು ಸಂವಾದದಲ್ಲಿ ಆಸಕ್ತಿಯಿಂದ ಭಾಗವಹಿಸಿ ಮಾಹಿತಿ ಪಡೆದುಕೊಂಡರು. ವಸ್ತು ಪ್ರದರ್ಶನ, ರೈತರು ಮತ್ತು ವಿಜ್ಞಾನಿಗಳ ಸಂವಾದ ಕಾರ್ಯಕ್ರಮದಲ್ಲಿ 260ಕ್ಕೂ ಹೆಚ್ಚು ರೈತರು ಭಾಗವಹಿಸಿ “ಕೃಷಿ ಅಭಿಯಾನ” ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆಯ ಕಾರ್ಯಕ್ರಮಗಳ ಪರಿಚಯ ಮಾಡಿದರು, ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ, ಮೀನುಗಾರಿಕೆ, ಪಶು ಸಂಗೋಪನೆ ಇಲಾಖೆಗಳ ಹಾಗೂ ವಿವಿಧ ಕೃಷಿ ಯಂತ್ರೋಪಕರಣಗಳ ವಸ್ತು ಪ್ರದರ್ಶನಗಳ ಮಾಹಿತಿ ಏರ್ಪಡಿಸಲಾಗಿತ್ತು.