ಕೂಡಿಗೆ, ಅ. 30: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಗಾರಿಕಾ ಬಡಾವಣೆಯ ಸಮೀಪದಲ್ಲಿದ್ದ ರೇಷ್ಮೆ ಮಾರುಕಟ್ಟೆಯ ಕಟ್ಟಡವನ್ನು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಾಗಿ ಪರಿವರ್ತಿಸಿ ಇದೀಗ ನವೀಕರಣಗೊಂಡು ತಾ. 31 ರಂದು ಉದ್ಘಾಟನೆಯಾಗಲಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯು ಕುಶಾಲನಗರದ ಬೈಚನಹಳ್ಳಿಯಲ್ಲಿ ಪ್ರಾರಂಭಗೊಂಡು 10 ತಿಂಗಳುಗಳು ಕಳೆದಿದ್ದು, ಇದೀಗ ಗ್ರಾಮಾಂತರ ಪ್ರದೇಶವಾದ ಕೂಡುಮಂಗಳೂರಿಗೆ ಸ್ಥಳಾಂತರಗೊಂಡಿದೆ.

ಅಂದು ಬೆಳಿಗ್ಗೆ ಪೂಜೆ ಹಾಗೂ ಹೋಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.