ಚೆಟ್ಟಳ್ಳಿ, ಜು. 6: ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಚೆಟ್ಟಳ್ಳಿ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಶ್ರೀ ಗುರು ಪೂಜೆ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯರಾದ ಹೆಚ್.ಎಸ್. ತಿಮ್ಮಪ್ಪಯ್ಯ ವಹಿಸಿದ್ದರು. ಮಂಗಳೂರು ವಿಭಾಗ ಸಹ ಕಾರ್ಯವಾಹ ಜನಾರ್ಧನ್ ಶ್ರೀ ಗುರು ಪೂರ್ಣಿಮೆಯ ಮಹತ್ವದ ಬಗ್ಗೆ ಮಾತನಾಡಿದರು. ತಾಲೂಕು ಕಾರ್ಯವಾಹ ವಿಶ್ವನಾಥ್, ಚೆಟ್ಟಳ್ಳಿಯ ಸ್ವಯಂ ಸೇವಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಮಣಿ ವಂದಿಸಿ, ಅನೀಶ್ ಕಾರ್ಯಕ್ರಮ ನಿರೂಪಿಸಿದರು.