ಸಿದ್ದಾಪುರ, ಜೂ. 26: ಸಮೀಪದ ನೆಲ್ಲಿಹುದಿಕೇರಿಯ ಬೆಟ್ಟದಕಾಡು ಹಾಗೂ ಬರಡಿ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನೀತಾ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ತುರ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ, ಕುಡಿಯುವ ನೀರಿಗೆ ಮೊದಲ ಆಧ್ಯತೆ ನೀಡಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಸಲು ಮುಂದಾಗುವದಾಗಿ ಹೇಳಿದ ಅವರು, ಸರಕಾರದ ಯೋಜನೆಗಳನ್ನು ಜನರಿಗೆ ತಲಪಿಸುವ ಕಾರ್ಯ ಮಾಡುವದಾಗಿ ತಿಳಿಸಿದರು.

ಈ ಸಂದರ್ಭ ತಾ.ಪಂ. ಸದಸ್ಯೆ ಸುಹಾದ ಅಶ್ರಫ್, ಸಮಗ್ರ ಅಭಿವೃದ್ಧಿ ಇಲಾಖಾಧಿಕಾರಿ ಸತೀಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಕೆ. ಹಕೀಂ, ಸದಸ್ಯ ಹನೀಫ್, ಅಭಿವೃದ್ಧಿ ಅಧಿಕಾರಿ ನಂಜುಂಡಸ್ವಾಮಿ, ತಾಲೂಕು ಅಧಿಕಾರಿ ರಾಮೇಗೌಡ ಮತ್ತಿತರರು ಹಾಜರಿದ್ದರು.