ಸಿದ್ದಾಪುರ, ಜೂ. 10: ಇಲ್ಲಿನ ಅಮೃತ ಯುವ ಮೊಗೇರ ಸೇವಾ ಸಮಾಜದ ವತಿಯಿಂದ ಜನಾಂಗದ ವಿದ್ಯಾರ್ಥಿಗಳಿಗೆ ತಾ. 12 ರಂದು ಗ್ರಾ.ಪಂ. ಸಭಾಂಗಣದಲ್ಲಿ ನೋಟ್ ಪುಸ್ತಕ ವಿತರಣೆ ಮಾಡಲಾಗುವದು ಎಂದು ಸಮಾಜದ ಸಿದ್ದಾಪುರ ಶಾಖೆಯ ಅಧ್ಯಕ್ಷ ಪಿ.ಎಂ. ರಘು ತಿಳಿಸಿದ್ದಾರೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾಪುರದ ಮೊಗೇರ ಸೇವಾ ಸಮಾಜ ಕಳೆದ 6 ವರ್ಷಗಳಿಂದ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರು ಭಾಗವಹಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಸಮಾಜದ ಪ್ರಮುಖರಾದ ರಾಮು, ರಾಜೇಶ್, ವಿಶ್ವ ಉಪಸ್ಥಿತರಿದ್ದರು.