ಸೋಮವಾರಪೇಟೆ, ಜು. 26: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಸಾಹಿತ್ಯಕ್ಕೆ ವಚನಕಾರರ ಕೊಡುಗೆ’ ಉಪನ್ಯಾಸ ಮತ್ತು ಕನ್ನಡ ಜಾಗೃತಿ ಫಲಕ ಬಿಡುಗಡೆ ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕಿ ಕೋಚಮಂಡ ಮನುಭಾಯಿ ಚಿಣ್ಣಪ್ಪ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್ ಬಿ. ಶಿವಪ್ಪ, ಧರ್ಮಗುರುಗಳಾದ ಅಬೂಬಕರ್ ಸಿದ್ದಿಕಿ ಮೋಟುಗೋಳಿ, ವಿನ್ಸೆಂಟ್ ಮೊಂಥೆರೋ, ಮಹಾಂತ ಸ್ವಾಮೀಜಿ, ಜಿಲ್ಲಾ ಕಸಾಪ ಅಧ್ಯಕ್ಷ ಲೋಕೇಶ್ ಸಾಗರ್, ಮಹಿಳಾ ಸಮಾಜದ ಅಧ್ಯಕ್ಷೆ ನಳಿನಿ ಗಣೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದು, ಸನ್ಮಾನಿಸಿದರು.