ಮಡಿಕೇರಿ, ಜೂ.8 : ಪ್ರಸಕ್ತ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 15 ರ ಸಂಜೆ 5.30 ಕೊನೆಯ ದಿನವಾಗಿದೆ.

5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಬೇಕು. ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಪೊನ್ನಂಪೇಟೆಯ ಶ್ರೀ ಸಾಯೀ ಶಂಕರ ವಿದ್ಯಾಸಂಸ್ಥೆ, ನಗರದ ಸಂತ ಜೊಸೇಫರ ಬಾಲಕಿಯರ ಪ್ರೌಢಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುವದು. ವಿದ್ಯಾರ್ಥಿಗಳಿಂದ ಜಾತಿ ದೃಡೀಕರಣ ಪ್ರಮಾಣ ಪತ್ರ, ಆದಾಯ ದೃಡೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವದು, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. 2 ಲಕ್ಷ ಒಳಗೆ ಇರಬೇಕು( ಈ ಬಗ್ಗೆ ತಹಶೀಲ್ದಾರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವದು) ಎಂದು ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ದಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ- 08272-229983, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ, ದೂ.ಸಂ, 08274-261261, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-223552, ಸಹಾಯಕ ನಿರ್ದೇಶಕರು, (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- 08276-281115, ಇಲ್ಲಿಗೆ ಸಲ್ಲಿಸಬಹುದಾಗಿದೆ.