*ಗೋಣಿಕೊಪ್ಪಲು, ಆ. 17: 70ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಭಾರತೀಯ ಜನತಾ ಪಕ್ಷ ಮತ್ತು ಯುವ ಮೋರ್ಚಾ ವೀರಾಜಪೇಟೆ ತಾಲೂಕು ಬಿಜೆಪಿ ವತಿಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದ ಮಹಾತ್ಮರನ್ನು ನೆನೆದು ರಾಷ್ಟ್ರ ಧ್ವಜ ಹಿಡಿದು ವಾಹನ ಜಾಥಾವನ್ನು ನಡೆಸಿತು.

ಶಾಸಕ ಕೆ.ಜಿ. ಬೋಪಯ್ಯ ಜಾಥಾಕ್ಕೆ ಚಾಲನೆ ನೀಡಿದರು. ಕುಟ್ಟದಿಂದ ಮಡಿಕೇರಿಯವರೆಗೆ ಹೊರಟ ಜಾಥಾದಲ್ಲಿ ಸುಮಾರು ನೂರಕ್ಕೂ ಹೆಚ್ಚು ವಾಹನಗಳು ಪಾಲ್ಗೊಂಡವು.

ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನೀಯರನ್ನು ನೆನೆದುಕೊಳ್ಳುವದು ಪ್ರತಿಯೊಬ್ಬ ಭಾರತೀಯನ ಹಕ್ಕು. ಯುವ ಸಮುದಾಯಕ್ಕೆ ನಮ್ಮ ದೇಶಕ್ಕಾಗಿ ಮಡಿದ ವೀರರ ಚರಿತ್ರೆಯನ್ನು ತಿಳಿಸುವ ಕಾರ್ಯ ಪ್ರಾಥಮಿಕ ಶಾಲಾ ಹಂತದಲ್ಲಿ ನಡೆಯಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟರು.

ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಯುವ ಮೋರ್ಚಾ ಅಧ್ಯಕ್ಷ, ಕಾಳನ ರವಿ, ತಾಲೂಕು ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ಯುವ ಮೋರ್ಚಾ ಅಧ್ಯಕ್ಷ ಅಜಿತ್ ಕರುಂಬಯ್ಯ, ಪ್ರಧಾನ ಕಾರ್ಯದರ್ಶಿ ತೋರಿರ ವಿನು, ಜಿಲ್ಲಾ ಕಾರ್ಯದರ್ಶಿ ಕಾಂತಿ ಸತೀಶ್, ತಾಲೂಕು ಪ್ರಧಾನ ಕಾರ್ಯದರ್ಶೀ ಚೆಪ್ಪುಡಿರ ದಿನು ಕಿಶೋರ್, ತಾ.ಪಂ ಉಪಾಧ್ಯಕ್ಷ ನೆಲ್ಲಿರ ಚಲನ್ ಕುಮಾರ್ ಹಾಜರಿದ್ದರು.