ಸೋಮವಾರಪೇಟೆ, ಜು. 6: ಇಲ್ಲಿನ ಪೊಲೀಸ್ ಠಾಣೆಯ ವತಿಯಿಂದ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಥಳೀಯ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಆಚರಿಸ ಲಾಯಿತು. ಠಾಣಾಧಿಕಾರಿ ಮಂಚಯ್ಯ, ಎಎಸ್‍ಐ ರವೀಂದ್ರನಾಥ್ ಅವರುಗಳು, ಮಾದಕ ದ್ರವ್ಯಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ವಿವರ ಮಾಹಿತಿ ನೀಡಿದರು.