ಮಡಿಕೇರಿ, ಜು. 2: ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ಮುಳಿಯ ಫೌಂಡೇಶನ್ ಮೂಲಕ ಓಂಕಾರೇಶ್ವರನ ಸನ್ನಿಧಿಯಲ್ಲಿ ಅಳವಡಿಸಲಾಗಿರುವ 35 ಸಾವಿರ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ರೋಟರಿ ಸಂಸ್ಥೆ ನಿಸ್ವಾರ್ಥ ಸೇವಾ ಸಂಸ್ಥೆಯಾಗಿದ್ದು, ಇಂತಹ ಇನ್ನಷ್ಟು ಉತ್ತಮ ಕೆಲಸಗಳು ನಡೆಯು ವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭ ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷ ಹಾಗೂ ಮುಳಿಯ ಫೌಂಡೇಶನ್ ಪ್ರಮುಖ ಕೇಶವಪ್ರಸಾದ್ ಮುಳಿಯ, ರೋಟರಿ ಮಿಸ್ಟಿಹಿಲ್ಸ್ ಸ್ಥಾಪಕಾಧ್ಯಕ್ಷ ಬಿ.ಜಿ. ಅನಂತಶಯನ, ಎಂಎಲ್‍ಸಿ ವೀಣಾ ಅಚ್ಚಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಟಿ. ಪ್ರದೀಪ್, ಓಂಕಾರೇಶ್ವರ ದೇವಾಲಯ ಪಾರುಪತ್ತೆಗಾರರಾದ ಚಿ.ನಾ. ಸೋಮೇಶ್, ರೋಟರಿ ಮಿಸ್ಟಿಹಿಲ್ಸ್ ಪದಾಧಿಕಾರಿಗಳು, ಸದಸ್ಯರು ಇದ್ದರು.

ಕೃಷ್ಣವೇಣಿ ಪ್ರಸಾದ್ ಪ್ರಾರ್ಥಿಸಿದರು.