ಸುಂಟಿಕೊಪ್ಪ, ಆ. 31: ಕೊಡಗರಹಳ್ಳಿ ಚಿಕ್ಲಿಹೊಳೆ ವಿಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಗಲಿದ್ದು, ತಾ. 17 ರಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಇತ್ತೀಚೆಗೆ ಭೂಮಿಪೂಜೆ ನೇರವೇರಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಅಬ್ಬಾಸ್ ತಿಳಿಸಿದ್ದಾರೆ.

ಕೊಡಗರಹಳ್ಳಿ ಚಿಕ್ಲಿಹೊಳೆ ರಸ್ತೆ ತೀರಾ ಹದಗೆಟ್ಟಿದ್ದು, ಹಲವಾರು ವರ್ಷಗಳಿಂದ ಈ ವಿಭಾಗದ ಜನರು ವಿದ್ಯಾರ್ಥಿಗಳು ರಸ್ತೆ ದುರಸ್ತಿಗೆ ಆಗ್ರಹಿಸಿ ಮುಷ್ಕರ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಮನವಿ ಸಲ್ಲಿಸಿದ್ದರು. ಈಗಾಗಲೇ ಈ ರಸ್ತೆ ಕಾಮಗಾರಿಗೆ ರೂ. 2 ಕೋಟಿ ಮಂಜೂರಾಗಿದೆ ಎಂದು ಪಂಚಾಯಿತಿ ಆಡಳಿತ ಸದಸ್ಯರೊಂದಿಗೆ ಜಿ.ಪಂ. ಸದಸ್ಯ ಪಿ.ಎಂ. ಲತೀಫ್ ನಿಯೋಗ ತೆರಳಿ ರಸ್ತೆಯ ಕಾಮಗಾರಿಯನ್ನು ಕೂಡಲೇ ನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡ ಮೇರೆ ಜಿಲ್ಲಾ ಉಸ್ತುವಾರಿ ಸಚಿವರ ಆದೇಶದಂತೆ ಕಾವೇರಿ ನೀರಾವರಿ ನಿಗಮದಿಂದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದೆ ಎಂದು ಮಾಹಿತಿ ನೀಡಿದರು.