ವೀರಾಜಪೇಟೆ, ಜು. 6: ಸಮೀಪದ ದೇವಣಗೇರಿಯ ಬಿ.ಸಿ. ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯ ಅಂಗವಾಗಿ ಯೋಗೋತ್ಸವವನ್ನು ಆಚರಿಸ ಲಾಯಿತು.

ಈ ಸಂಬಂಧ ನಡೆದ ಕಾರ್ಯಕ್ರಮದಲ್ಲಿ ವಿಜಯ ಬ್ಯಾಂಕ್‍ನ ನಿವೃತ್ತ ವ್ಯವಸ್ಥಾಪಕ ರವಿ ಮತ್ತು ವೀರಾಜಪೇಟೆ ಕಾವೇರಿ ಕಾಲೇಜಿನ ಪ್ರಾಧ್ಯಾಪಕಿ ಉಷಾಲತಾ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದರ್ಭದಲ್ಲಿ ಯೋಗ ಗುರು ಪಿ.ಎ. ಲಕ್ಷ್ಮಿ ನಾರಾಯಣ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಮತ್ತು ವಿವಿಧ ಆಸನಗಳನ್ನು ಪ್ರದರ್ಶಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸುನಿಲ್ ನಾಣಯ್ಯ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಸ್ವಾಗತಿಸಿದರು. ವಿ.ಆರ್. ಸಂದೀಪ್ ವಂದಿಸಿದರು. ಪ್ರಮೀಳಾ ಕುಮಾರಿ ನಿರೂಪಿಸಿದರು.