ಕುಶಾಲನಗರ, ಜು. 7: ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಘಟಕದ ಕಾರ್ಯಕಾರಿಣಿ ಸಮಿತಿ ಸಭೆ ತಾ. 9 ರಂದು ಅಪರಾಹ್ನ 2.30 ಗಂಟೆಗೆ ಶನಿವಾರಸಂತೆಯ ವಿಶ್ವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ. ಧರ್ಮಪ್ಪ ವಹಿಸಲಿದ್ದು, ಸಭೆಯಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಹಾಗೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ವೀರಶೈವ ಜನಾಂಗದ ಭಾಂದವರಿಗೆ ಸನ್ಮಾನ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜ್ ತಿಳಿಸಿದ್ದಾರೆ.