ಕುಶಾಲನಗರ, ನ. 19: ಮಹಿಳೋದಯ ಮಹಿಳಾ ಒಕ್ಕೂಟ ಆಶ್ರಯದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಜನ ಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಂವಾದ ಕಾರ್ಯಕ್ರಮ ಕುಶಾಲನಗರದಲ್ಲಿ ಏರ್ಪಡಿಸಲಾಗಿತ್ತು.ಮೈಸೂರು ಜಿಲ್ಲಾ ಸಂಯೋಜಕ ಮೋಳಿ ಪೊಟ್ತಾದೊ ಅಧ್ಯಕ್ಷತೆಯಲ್ಲಿ ನಡೆದ ಸಂವಾದ ಕಾರ್ಯಕ್ರಮವನ್ನು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಉದ್ಘಾಟಿಸಿದರು. ಜಿಲ್ಲೆಯ ವಿವಿಧ ಸರಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ, ಸಿಬ್ಬಂದಿಗಳ ನಿರ್ಲಕ್ಷ್ಯತನ, ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಅಗತ್ಯ ಪ್ರಮಾಣ ಪತ್ರ ಹಾಗೂ ಪಿಂಚಣಿ ಪಡೆದುಕೊಳ್ಳಲು ಉಂಟಾಗುತ್ತಿರುವ ಸಮಸ್ಯೆಗಳು, ಬಸ್ ಪಾಸ್ ಮತ್ತು ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸುವಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶೇಷಚೇತನ ಇಲಾಖೆಯ ಅಧಿಕಾರಿ ಹರೀಶ್, ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮಿ, ಜಿಲ್ಲಾ ಸಂಯೋಜಕಿ ಜಾಯ್ಸ್ ಮೆನೇಜಸ್, ಸದಸ್ಯರಾದ ಗ್ರೇಸ್ ಜಾಯ್ಸ್, ಕಾರ್ಯಕರ್ತರಾದ ನಿರ್ಮಲಾ, ಸದಸ್ಯರು ಇದ್ದರು.