ಕೂಡಿಗೆ, ಜೂ. 27: ಕೊಡಗು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾಗಿ ಹೆಚ್.ಎನ್, ವೆಂಕಟೇಶ್ ಆಯ್ಕೆಯಾಗಿ ದ್ದಾರೆ. ಸೋಮವಾರಪೇಟೆ ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾಗಿ ಹೆಚ್.ಜೆ.ಶಿವಣ್ಣ, ವೀರಾಜಪೇಟೆ ತಾಲೂಕು ಅಧ್ಯಕ್ಷರಾಗಿ ವೆಂಕಟೇಶ್, ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ಮಧು ಇವರುಗಳನ್ನು ಬೆಂಗಳೂರಿನಲ್ಲಿ ನಡೆದ ಸವಿತಾ ಸಮಾಜದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ನೇಮಕ ಮಾಡಲಾಗಿದೆ. ಮೂರು ತಾಲೂಕುಗಳ ಪ್ರತಿನಿಧಿಗಳಾಗಿ ರಾಮಣ್ಣ, ಪುಟ್ಟರಾಜು, ದಿನೇಶ್, ಚರಣ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಜಿಲ್ಲಾ ಸವಿತಾ ಸಮಾಜದ ನೂತನ ಅಧ್ಯಕ್ಷ ವೆಂಕಟೇಶ್ ತಿಳಿಸಿದ್ದಾರೆ.