ಸುಂಟಿಕೊಪ್ಪ, ಮೇ 6: ಕಾರ್ಮಿಕರ ದಿನಾಚರಣೆಯ ಅಂಗವಾಗಿ ಸ್ತ್ರೀ ಶಕ್ತಿ ಸಂಘಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಂಡಿದ್ದರು.

ಸುಂಟಿಕೊಪ್ಪ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ಜನನಿ, ಭೂಮಿಕ ಹಾಗೂ ಸೂರ್ಯ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಸ್ವಚ್ಛತಾ ಆಂದೋಲನವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎಂ. ಲತೀಫ್ ಉದ್ಘಾಟಿಸಿದರು.

ಈ ಸಂದರ್ಭ ಪಂಚಾಯಿತಿ ಸದಸ್ಯರಾದ ನಾಗರತ್ನಾ, ಶಿವಮ್ಮ, ಮಡಿಕೇರಿ ಬ್ಲಾಕ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಆರ್.ಕೆ. ಚಂದ್ರ, ಬ್ಲೂ ಬಾಯ್ಸ್ ಯೂತ್ ಕ್ಲಬ್ ಅಧ್ಯಕ್ಷ ಎ. ಶ್ರೀಧರ್ ಕುಮಾರ್, ಕಾರ್ಯದರ್ಶಿ ಬಿ.ಕೆ. ಪ್ರಶಾಂತ್ (ಕೊಕ್ಕಾ), ಅಂಬೇಡ್ಕರ್ ಸಂಘದ ಸುಂಟಿಕೊಪ್ಪ ನಗರಾಧ್ಯಕ್ಷ ಎಂ.ಎಸ್. ರವಿ, ತಲೆಹೊರೆ ಕನ್ನಡಾಭಿಮಾನಿ ಸಂಘ ಪದಾಧಿಕಾರಿಗಳು ವಿವಿಧ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.