ವೀರಾಜಪೇಟೆ, ಮಾ.5: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ತಾ. 7ರಂದು 11 ಗಂಟೆಗೆ ಇಲ್ಲಿನ ಕಾರು ನಿಲ್ದಾಣದಲ್ಲಿ ಜನವೇದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಬ್ದುಲ್ ಸಲಾಂ ಅವರು ಕೇಂದ್ರ ಸರ್ಕಾರವು ನಗದು ಅಮಾನೀಕರಣ ಸೇರಿದಂತೆ ಹಲವಾರು ಜನ ವಿರೋಧಿ ನೀತಿಗಳನ್ನು ಜಾರಿಗೆ ತಂದು ಜನ ಸಾಮಾನ್ಯರ ಬದುಕನ್ನೇ ತತ್ತರ ಗೊಳಿಸಿದೆ. ಪ್ರಧಾನ ಮಂತ್ರಿಗಳಿಗೆ ಒಂದು ಕುರ್ಚಿಯನ್ನು ಇಟ್ಟು ಅವರನ್ನು ಆಹ್ವಾನಿಸಿ ನಮ್ಮ ವೇದನೆಯನ್ನು ನಿವೇದನೆ ಮಾಡಿಕೊಡುವ ರೀತಿಯಲ್ಲಿ ಕೇಂದ್ರ ಸರ್ಕಾರದ ಆಡಳಿತ ವೈಫÀಲ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವದು ಎಂದು ಹೇಳಿದರು.

ಆರ್ ಎಂ ಸಿ ಸದಸ್ಯ ಮಾಳೇಟಿರ ಕೆ.ಬೋಪಣ್ಣ ಮಾತನಾಡಿ ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್, ಪ್ರಧಾನ ಕಾರ್ಯದರ್ಶಿ ಹುಸೇನ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಸಂಸದ ಎಚ್ ವಿಶ್ವನಾಥ್, ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಚಿಲ್ಲವಂಡ ಕಾವೇರಪ್ಪ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಆಲಿ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಂ ಶಶಿಧರನ್, ಸಿದ್ದಾಪುರ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎಂ ಅಬ್ದುಲ್ ಸುಕೂರ್ ಮತ್ತಿತರರು ಉಪಸ್ಥಿತರಿದ್ದರು.