ಸೋಮವಾರಪೇಟೆ, ಮಾ. 5: ಇಲ್ಲಿಗೆ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಕರ ಗ್ರಾಮದಲ್ಲಿ ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯಡಿ ರೂ. 10 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆಯನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.ಗ್ರಾಮದ ರಸ್ತೆ ಹಾಳಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಈ ಹಿಂದೆ ಮನವಿ ಸಲ್ಲಿಸಿದ್ದರು. ನಂತರ ಸ್ಥಳೀಯ ಶಾಸಕರ ಅಭಿಪ್ರಾಯ ಪಡೆದು, ರೂ. 10 ಲಕ್ಷಗಳನ್ನು ಬಿಡುಗಡೆಗೊಳಿಸಿದ್ದೇನೆ. ಕಾಮಗಾರಿಯೂ ಮುಕ್ತಾಯವಾಗಿದೆ ಎಂದು ಸಂಸದರು ಈ ಸಂದರ್ಭ ಹೇಳಿದರು. ಶಾಸಕ ಅಪ್ಪಚ್ಚು ರಂಜನ್, ಹಿರಿಕರ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎನ್. ವಸಂತ್ ಕುಮಾರ್, ಮಾಜಿ ಅಧ್ಯಕ್ಷ ಹೆಚ್.ಪಿ. ಸುರೇಶ್, ಗೌಡಳ್ಳಿ ಗ್ರಾ.ಪಂ. ಸದಸ್ಯ ಎಸ್.ಎನ್. ಪೃಥ್ವಿ, ಪ್ರಮುಖರಾದ ಬಿ.ಡಿ. ಮಂಜುನಾಥ್, ಶುಂಠಿ ಸುರೇಶ್, ಎಂ.ಎನ್. ಕೊಮಾರಪ್ಪ, ಹೆಚ್.ಡಿ. ಸುಬ್ರಮಣಿ, ಸುದೀನ್ ಮತ್ತಿತರರು ಉಪಸ್ಥಿತರಿದ್ದರು.