ಮಡಿಕೇರಿ, ಮಾ. 20: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ, ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ದೇವರಾಜು ಅರಸು ಭವನದಲ್ಲಿ 2016-17 ನೇ ಸಾಲಿನ ಕೊಡಗು ಜಿಲ್ಲಾಮಟ್ಟದ ‘ಪರಿಸರ ಮಿತ್ರ’ ಶಾಲಾ ಪ್ರಶಸ್ತಿಗಳನ್ನು ವಿತರಿಸಲಾಯಿತು. ಗರಗಂದೂರು ಶಾಲೆ ಪ್ರಥಮ ಸ್ಥಾನ ಪಡೆಯಿತು.
ಜಿಲ್ಲಾಮಟ್ಟದ ‘ಪರಿಸರ ಮಿತ್ರ’ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ‘ಪರಿಸರ ಮಿತ್ರ’ ಶಾಲಾ ಪ್ರಶಸ್ತಿ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ|| ರಿಚರ್ಡ್ ವಿನ್ಸೆಂಟ್ ಡಿ’ಸೋಜ ಅವರು ಶಾಲೆಯ ಪರಿಸರ ಉತ್ತಮವಾಗಿದ್ದರೆ ಮಕ್ಕಳ ಕಲಿಕೆಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದರು.
ಪ್ರತಿಯೊಬ್ಬರೂ ಕಾಳಜಿ ಬೆಳೆಸಿಕೊಂಡಾಗ ಮಾತ್ರ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ. ಶಾಲಾ ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
‘ಪರಿಸರ ಮಿತ್ರ’ ಶಾಲೆಗಳ ಪರಿಸರ ಚಟುವಟಿಕೆಗಳ ಕುರಿತಂತೆ ಹೊರತಂದಿರುವ ‘ಹಸಿರು -ನನಸಾದ ಕನಸು’ ಪುಸ್ತಕ ಬಿಡುಗಡೆಗೊಳಿಸಿದ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ. ಸೂರ್ಯಸೇನ್, ಹಸಿರು ಪರಿಸರವನ್ನು ನಿರ್ಮಿಸುವ ಮೂಲಕ ಶಾಲೆಗಳನ್ನು ಆಕರ್ಷಣೀಯವಾಗಿ ರೂಪಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಹಸಿರು ಶಾಲಾ ಪ್ರಶಸ್ತಿ ವಿತರಿಸಿ ಮಾತನಾಡಿದ ಮಾಲಿನ್ಯ ನಿಯಂತ್ರಣ ಮಂಡಳಿಯ ಮೈಸೂರು ವಲಯ ಪರಿಸರ ಅಧಿಕಾರಿ ಕೆ.ಎಂ.ಲಿಂಗರಾಜು, ಈ ಕಾರ್ಯಕ್ರಮದ ಮೂಲಕ ಶಾಲೆಯ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲು ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಡಿಡಿಪಿಐ ಜಿ.ಆರ್. ಬಸವರಾಜ್ ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಶಾಲೆಗಳನ್ನು ಹಸಿರೀಕರಣ ಗೊಳಿಸಿ ಆಕರ್ಷಣೀಯವಾಗಿ ರೂಪಿಸಲು ಕ್ರಮವಹಿಸಲಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯ ಅಧಿಕಾರಿ ಜಿ.ಆರ್.ಗಣೇಶನ್, ‘ಪರಿಸರ ಮಿತ್ರ’ ಶಾಲೆಗಳು ಅಳವಡಿಸಿ ಕೊಂಡಿರುವ ಪರಿಸರ ಸ್ನೇಹಿ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಸಂಯೋಜಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ‘ಪರಿಸರ ಮಿತ್ರ’ ಶಾಲೆಗಳ ಇಕೋ ಕ್ಲಬ್ಗಳ ಪರಿಸರ ಚಟುವಟಿಕೆಗಳ ಕುರಿತು ವಿವರಿಸಿದರು.
‘ಪರಿಸರ ಮಿತ್ರ’ ಶಾಲೆಯ ಪ್ರಥಮ ಸ್ಥಾನ ಪಡೆದ ಗರಗಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಕೆ.ಪಾರ್ವತಿ, ವಿದ್ಯಾರ್ಥಿನಿ ದೀಪ್ತಿ ಹಾಗೂ ಮೌಲ್ಯಮಾಪನದ ತಂಡದ ಯೋಜನಾ ಸಹಾಯಕ ಸಮನ್ವಯಾಧಿಕಾರಿ ಮಹದೇವ್ ಮಾತನಾಡಿದರು.
ಕೂಡಿಗೆ ಡಯಟ್ನ ಪ್ರಾಂಶುಪಾಲ ಎಸ್.ದೊಡ್ಡಮಲ್ಲಪ್ಪ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ, ಜಿಲ್ಲಾ ಬಿಸಿಎಂ.ಅಧಿಕಾರಿ ಕೆ.ವಿ.ಸುರೇಶ್, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಡಿ.ಎಂ.ರೇವತಿ, ಸಹ ಕಾರ್ಯದರ್ಶಿ ಎಸ್.ನಾಗರಾಜ್, ಸದಸ್ಯ ಜಿ.ಶ್ರೀಹರ್ಷ ಇತರರು ಇದ್ದರು.
ಶಿಕ್ಷಕ ಪಿ.ಎಸ್.ರವಿಕೃಷ್ಣ ನಿರ್ವಹಿಸಿದರು. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಇ.ಮೊಹಿದ್ದೀನ್ ವಂದಿಸಿದರು. ಕಡಗದಾಳು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು.