ಸೋಮವಾರಪೇಟೆ, ಏ. 19: ಗ್ರಾಮ ದೇವಿಯ ಪೂಜೋತ್ಸವಗಳನ್ನು ಗ್ರಾಮಸ್ಥರೆಲ್ಲರೂ ಸೇರಿ ಸಾಮೂಹಿಕ ವಾಗಿ ಆಚರಿಸುವದರಿಂದ ಗ್ರಾಮದಲ್ಲಿ ಬಾಂಧವ್ಯ ವೃದ್ಧಿಸಿ ಸಾಮರಸ್ಯ ನೆಲೆಸುತ್ತದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಿಸಿದರು.
ಸಮೀಪದ ಹಾನಗಲ್ಲು ಬಾಣೆ ಗ್ರಾಮದ ಶ್ರೀ ಚೌಡೇಶ್ವರಿ ಸೇವಾ ಸಮಿತಿಯ ವತಿಯಿಂದ ಆಯೋಜಿಸ ಲಾಗಿದ್ದ ಚೌಡೇಶ್ವರಿ ದೇವಿಯ 28ನೇ ವರ್ಷದ ವಾರ್ಷಿಕ ಮಹಾ ಪೂಜೋತ್ಸವದ ಸಭಾ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಾನಗಲ್ಲುಬಾಣೆಯಿಂದ ಕಾನ್ವೆಂಟ್ಬಾಣೆ ಸಂಪರ್ಕಿಸುವ ರಸ್ತೆಗೆ ಅಗತ್ಯವಾಗಿ ಬೇಕಾಗಿದ್ದ ಕಿರು ಸೇತುವೆ ಕಾಮಗಾರಿಗೆ 5ಲಕ್ಷ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸಾರ್ವಜನಿಕ ರಸ್ತೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಯಾರೂ ಸಹ ಅಡ್ಡಗಾಲು ಹಾಕಬಾರದು. ಸಾರ್ವಜನಿಕ ಉಪಯೋಗದ ಕಾಮಗಾರಿಗಳಿಗೆ ಸ್ಥಳೀಯರೂ ಸಹ ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ಅಧ್ಯಕ್ಷ ಹೆಚ್.ಆರ್. ಶಿವಕುಮಾರ್ ವಹಿಸಿದ್ದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಪೂರ್ಣಿಮಾ ಗೋಪಾಲ್, ಬಿ.ಜೆ. ದೀಪಕ್, ತಾ.ಪಂ. ಸದಸ್ಯೆ ಹೆಚ್.ಎನ್. ತಂಗಮ್ಮ, ಗ್ರಾ.ಪಂ. ಅಧ್ಯಕ್ಷೆ ರೇಣುಕಾ ವೆಂಕಟೇಶ್, ಉಪಾಧ್ಯಕ್ಷ ಮಿಥುನ್, ಸದಸ್ಯ ಶಿವಪ್ಪ ಅವರುಗಳು ಉಪಸ್ಥಿತರಿದ್ದರು.
28ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ಗಣಪತಿಹೋಮ, ಸಾಮೂಹಿಕ ಪ್ರಾರ್ಥನೆ, ಮಹಾಮಂಗಳಾರತಿ ನಂತರ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಗ್ರಾಮಸ್ಥರಿಗೆ ವಿವಿಧ ಕ್ರೀಡಾಕೂಟ ಗಳನ್ನು ಆಯೋಜಿಸ ಲಾಗಿತ್ತು. ನಂತರ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.