ಸುಂಟಿಕೊಪ್ಪ, ಏ. 19: ಇಲ್ಲಿಗೆ ಸಮೀಪದ ಕೊಡಗರಹಳ್ಳಿ ಗ್ರಾಮದ ಮಾರುತಿ ನಗರದ ಶ್ರೀ ಆಂಜನೇಯ ಸ್ವಾಮಿ ಮಠದ ವಾರ್ಷಿಕೋತ್ಸವ ಮತ್ತು ಹನುಮ ಜಯಂತಿಯು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.

ಗಣಪತಿ ಹೋಮ, ನವಕಲಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆದು ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.