ಸೋಮವಾರಪೇಟೆ,ಏ.18: ಜೆಡಿಎಸ್ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ, ಪಕ್ಷದ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ ಅವರಿಗೆ ನೀಡಲಾಗಿದೆ.ಈ ಕುರಿತು ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನೇಮಕಾತಿ ಕುರಿತು ಆದೇಶ ಪತ್ರ ರವಾನಿಸಿದ್ದು, ಮಾಜಿ ಸಚಿವ ಬಿ.ಎ. ಜೀವಿಜಯ ಅವರು ಪಕ್ಷದ ಮುಖಂಡ ವಿ.ಎಂ. ವಿಜಯರವರಿಗೆ ಆದೇಶ ಪ್ರತಿ ಹಸ್ತಾಂತರಿಸಿದರು.
ಈ ಸಂದರ್ಭ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್. ಸುರೇಶ್, ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.