ಸೋಮವಾರಪೇಟೆ, ಏ. 20: ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಐಇಸಿ ವಿಭಾಗದಿಂದ ಬೆಟ್ಟದಳ್ಳಿಯಲ್ಲಿ ಸುಗ್ಗಿ ಮಹೋತ್ಸವದ ಪ್ರಯುಕ್ತ ಆರೋಗ್ಯ ಶಿಕ್ಷಣ ಮಾಹಿತಿ ಶಿಬಿರವನ್ನು ನಗರಳ್ಳಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಚಾಲನೆ ನೀಡಿದರು.ಕಲುಷಿತ ನೀರು ಮತ್ತು ಆಹಾರದಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ, ಸೊಳ್ಳೆಗಳಿಂದ ಹರಡುವ ರೋಗಗಳು, ಪೌಷ್ಟಿಕ ಆಹಾರ, ತಾಯ್ತನದ ಮಹತ್ವ ಮತ್ತು ‘ಎ’ ಅನ್ನಾಂಗ ಕಾರ್ಯಕ್ರಮದ ಬಗ್ಗೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ಮಾಹಿತಿ ನೀಡಿದರು. ಈ ಸಂದರ್ಭ ಶ್ರೀ ಸಬ್ಬಮ್ಮ ದೇವಾಲಯ ಸಮಿತಿ ಅಧ್ಯಕ್ಷ ಕೆ.ಟಿ. ಜೋಯಪ್ಪ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಮಹೇಶ್, ದಮಯಂತಿ, ಪೂವಮ್ಮ, ತೀರ್ಥ, ದಿವ್ಯ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.