ಮಡಿಕೇರಿ, ಜೂ.23: ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ವತಿಯಿಂದ ತಾ 24 ರಂದು (ಇಂದು) ಬೆಳಗ್ಗೆ 11 ಗಂಟೆಗೆ ಹೊಸ್ಕೇರಿ ಗ್ರಾಮದ ಭಾರತೀಯ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಮುಂಗಾರಿನ ಕೃಷಿ ಚಟುವಟಿಕೆಗಳು, ಬೀಜೋಪಚಾರ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕ ಬಳಕೆ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಡಿಕೇರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.