ಮಡಿಕೇರಿ, ಆ. 22: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ಇತರ ಹಿಂದುಳಿದ ವಿಭಾಗ ಸಮಿತಿ ಮತ್ತು ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಜಂಟಿ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 102ನೇ ಜಯಂತಿ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ 73ನೇ ಜಯಂತಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.ಜಿಲ್ಲಾ ಕಾಂಗ್ರೆಸ್ ಇತರ ಹಿಂದುಳಿದ ವಿಭಾಗದ ಜಿಲ್ಲಾ ಅಧ್ಯಕ್ಷ ಕೊರಕುಟ್ಟೀರ ಸರ ಚಂಗಪ್ಪ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ದಿ. ದೇವರಾಜ ಅರಸು ಹಾಗೂ ದಿ. ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಕೆಪಿಸಿಸಿಯ ಕಾರ್ಯದರ್ಶಿ ಸಿ.ಎಸ್. ಅರುಣ್ ಮಾಚಯ್ಯ ಪಾಲ್ಗೊಂಡಿದ್ದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಪೊನ್ನಂಪೇಟೆಯ ಬ್ಲಾಕ್ ಕಾಂಗ್ರೆಸ್ ಒಬಿಸಿ ಅಧ್ಯಕ್ಷ ಶಾಜಿ ಅಚ್ಚುತ್ತನ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನ ಒಬಿಸಿ ಅಧ್ಯಕ್ಷ ಎಸ್.ಕೆ. ಸುಂದರ್, ಕೊಡಗು ಜಿಲ್ಲಾ ಕಾಂಗ್ರೆಸ್ ಸೇವಾದಳದ ಕಾರ್ಯದರ್ಶಿ ಸುಬ್ಬಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನ ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣಪ್ಪ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಜಗದೀಶ್, ವಿಜಯನ್, ಎಂ.ಬಿ. ಮುದ್ದಪ್ಪ, ಎಂ.ಎಂ. ಆಸಿಫ್, ಸದಸ್ಯ ಜೈತ್, ಪುಷ್ಪ ಪೂಣಚ್ಚ, ಎ.ಎಂ. ಮಹಮ್ಮದ್, ಮುರುಗ, ಸೇವಾದಳದ ಶೇಖ್ ಅಹಮ್ಮದ್, ಪಿ.ಕೆ. ಗಿರೀಶ್ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.