ಸೋಮವಾರಪೇಟೆ, ಸೆ. 4: ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜ್‍ನಡಿ ತಾಲೂಕಿನ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗೂರು, ಹೊಸತೋಟ, ಕಾಜೂರು ಗ್ರಾಮದ ರಸ್ತೆ ಅಭಿವೃದ್ಧಿಗೆ ಬಿಡುಗಡೆಯಾದ 18 ಲಕ್ಷ ರೂ.ಗಳ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಚಾಲನೆ ನೀಡಿದರು.

ನಂತರ ಹೊಸತೋಟದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿಗೆ ಮುಖ್ಯಮಂತ್ರಿ ಗಳು ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದು, ಉಸ್ತುವಾರಿ ಸಚಿವರಾದ ಸೀತಾರಾಂ ಅವರ ವಿಶೇಷ ಕಾಳಜಿಯಲ್ಲಿ ಪ್ಯಾಕೇಜ್ ಮೂಲಕ ಕೊಡಗು ಜಿಲ್ಲೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇನ್ನೂ ಹೆಚ್ಚಿನ ಬೇಡಿಕೆಯ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ಅನುದಾನದ ಭರವಸೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಸ್.ಚಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್, ತಾಲೂಕು ಪಂಚಾಯಿತಿ ಸದಸ್ಯ ಬಿ.ಬಿ.ಸತೀಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಕೃಷ್ಣ, ಮಂಜುಳಾ, ಕೆ.ಪಿ. ದಿನೇಶ್, ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಪಿ.ಮುತ್ತಪ್ಪ, ಪ್ರಮುಖರಾದ ಎಂ.ಎನ್.ಅಶೋಕ್, ಹೆಚ್.ಸಿ.ಚಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.