*ಸಿದ್ದಾಪುರ, ಸೆ.5 : ಚೆಟ್ಟಳ್ಳಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಸದಸ್ಯರುಗಳು ಹಾಗೂ ಶಿಕ್ಷಕ ವೃದದಿಂದ ಶಾಲೆಯ ಅಭಿವೃದ್ಧಿಗೆ ಶ್ರಮಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಎಸ್‍ಡಿಎಂಸಿ ಅಧ್ಯಕ್ಷೆ ಸರಸ್ವತಿ ಅವರ ಅಧ್ಯಕ್ಷತೆಯಲ್ಲಿ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಜಿ.ಪಂ. ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರೂ ಹಾಲಿ ತಾ.ಪಂ. ಸದಸ್ಯರಾದ ಬಲ್ಲಾರಂಡ ಮಣಿಉತ್ತಪ್ಪ ವಾಲ್ನೂರು ತ್ಯಾಗತ್ತೂರು ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ಚೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷೆ ವತ್ಸಲಾ ಚೆಟ್ಟಳ್ಳಿ ಗ್ರಾ.ಪಂ. ಪಿಡಿಓ ಮಂಜುನಾಥ್ ಇವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾದ್ಯಾಯರು, ಸಹಶಿಕ್ಷಕರು ಎಸ್‍ಡಿಎಂಸಿ ಸದಸ್ಯರು ಶಾಲಾ ಮಕ್ಕಳು ಉಪಸ್ಥಿತರಿದ್ದರು.