ಗೋಣಿಕೊಪ್ಪಲು, ಸೆ. 9: ಪೆÇನ್ನಂಪೇಟೆಯಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ಕ್ರೀಡಾಕೂಟ ಅಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಚಾಲನೆಗೊಳ್ಳಲಿದೆ.

ಕ್ರೀಡಾ ಧ್ವಜಾರೋಹಣವನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮುಂತಾದವರು ಭಾಗವಹಿಸಲಿದ್ದಾರೆ.

ತಾ.ಪಂ.ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಜರುಗುವ ಸಭಾ ಕಾರ್ಯಕ್ರಮವನ್ನು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಉದ್ಘಾಟಿಸಲಿದ್ದಾರೆ. ಪಥ ಸಂಚಲನದ ವಂದನೆ ಸ್ವೀಕಾರ ಮೂಕೋಂಡ ಶಶಿ ಸುಬ್ರಮಣಿ, ಅತಿಥಿಗಳಾಗಿ ಪೆÇನ್ನಂಪೇಟೆ ಜಿ.ಪಂ. ಸದಸ್ಯೆ ಶ್ರೀಜಾ ಸಾಜಿ, ತಾ.ಪಂ.ಸದಸ್ಯೆ ಮೂಕಳೇರ ಆಶಾ ಪೂಣಚ್ಚ, ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತಾ, ಮಾಜಿ ಎಂ.ಎಲ್.ಸಿ. ಅರುಣ್‍ಮಾಚಯ್ಯ, ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್ ಮುಂತಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಕ್ರೀಡಾಕೂಟದ ಅಧ್ಯಕ್ಷರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಜಿ.ಎ., ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಸ್.ಪಿ. ಮಹದೇವ, ತಾಲೂಕು ದೈಹಿಕ ಪರಿವೀಕ್ಷಕರು ಪಿ.ಡಿ. ರತಿ ಮುಂತಾದ ಅಧಿಕಾರಿಗಳ ಉಸ್ತುವಾರಿಯಲ್ಲಿ ತಾಲೂಕು ಕ್ರೀಡಾಕೂಟ ನಡೆಯಲಿದೆ.