ಮಡಿಕೇರಿ, ಸೆ. 13: ಜಿಲ್ಲೆಯಲ್ಲಿ ಕೇಂದ್ರ ಪುರಸ್ಕøತ ಯೋಜನೆಯಡಿಯಲ್ಲಿ ಮೇಲ್ದರ್ಜೆಗೇರಿಸಿದ ಆಯುಷ್ ಆಸ್ಪತ್ರೆಗಳಿಗೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಸಂಬಂಧ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿತ್ತು, ಅದರಂತೆ ಆಗಸ್ಟ್ 31 ರಂದು ಅರ್ಹ ಅಭ್ಯರ್ಥಿಗೆ ಸಂದರ್ಶನ ನಡೆಸಲಾಗಿದೆ.

ಅದರಂತೆ ಅಧ್ಯಕ್ಷರು, ಆಯ್ಕೆ ಸಮಿತಿ (ಕೇಂದ್ರ ಪುರಸ್ಕøತ ಯೋಜನೆಯಡಿಯಲ್ಲಿ ಸಿಬ್ಬಂದಿ ನೇಮಕಾತಿ ಆಯುಷ್ ಇಲಾಖೆ) ಹಾಗೂ ಜಿಲ್ಲಾಧಿಕಾರಿಗಳ ನಡವಳಿ ಆದೇಶದಂತೆ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಪಟ್ಟಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಈ ಹುದ್ದೆಗಳ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ತಾ. 20 ರಂದು ಬೆಳಿಗ್ಗೆ 11 ಗಂಟೆಯವರೆಗೆ ಸದಸ್ಯ ಕಾರ್ಯದರ್ಶಿ ಆಯ್ಕೆ ಸಮಿತಿ (ಕೇಂದ್ರ ಪುರಸ್ಕøತ ಯೋಜನೆಯಡಿಯಲ್ಲಿ ಸಿಬ್ಬಂದಿ ನೇಮಕಾತಿ ಆಯುಷ್ ಇಲಾಖೆ) ಹಾಗೂ ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಇಲಾಖೆ, ಮಡಿಕೇರಿ ಇವರಿಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ತಿಳಿಸಿದ್ದಾರೆ.