ಗೋಣಿಕೊಪ್ಪಲು, ಸೆ. 13: ಪೊನ್ನಂಪೇಟೆ ಪೊಲೀಸ್ ಠಾಣೆಯ ಪೇದೆ ಸÀಮೀಲ್ ಹಿಂದೂ ವಿರೋಧಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಭಾವನೆಗಳಿಗೆ ದಕ್ಕೆ ತರುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಈತನನ್ನು ಸೇವೆಯಿಂದ ವಜಾ ಮಾಡಬೇಕು ಹಾಗೂ ಆತನ ವಿರುದ್ದ ಮೊಕದ್ದಮೆ ದಾಖಲು ಮಾಡಬೇಕೆಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿತು.

ಡಿವೈಎಸ್‍ಪಿ ನಾಗಪ್ಪ ಮಾತನಾಡಿ, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಅವರು ನಮಗೆ ನಿರ್ದೇಶನ ನೀಡಿದ್ದು, ಆತನ ವಿರುದ್ಧ ತನಿಖೆಗೆ ಆದೇಶ ಮಾಡಿದ್ದಾರೆ. ಈ ಬಗ್ಗೆ ತನಿಖಾ ತಂಡ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆ ತಾಲ್ಲೂಕು ಅಧ್ಯಕ್ಷ ಲಾಲಾ ಅಯ್ಯಣ್ಣ, ತಾಲೂಕು ಸಂಚಾಲಕ ಶರತ್, ಆರ್‍ಎಸ್‍ಎಸ್ ಸಂಚಾಲಕ ಚೆಕ್ಕೇರ ಮನು, ತಾಲ್ಲೂಕು ಕಾರ್ಯವಾಹಕ ಸುದಾ ಕಾರ್ಮಾಡ್, ಬಿಜೆಪಿ ಮುಖಂಡ ಮಚ್ಚಮಾಡ ರವೀಂದ್ರ, ವಿಭಾಗೀಯ ಸಂಚಾಲಕ ಜೀವನ್, ಜಿಲ್ಲಾ ಕಾರ್ಯದರ್ಶಿ ಕಿರಣ್ ಸೇರಿದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.