ಮಡಿಕೇರಿ, ಸೆ. 13: ಪೊಲೀಸ್ ಅಧಿಕಾರಿ ಎಂ.ಕೆ. ಗಣಪತಿ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಸಂಬಂಧ ತಾ. 16ರಂದು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಭಾರತೀಯ ಜನತಾಪಾರ್ಟಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಆಗ್ರಹಿಸಲಿದೆ ಎಂದು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.

ಸಭೆ: ಈ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ಬಿಜೆಪಿ ಕಾರ್ಯಕಾರಿಣಿ ಸಭೆಯು ತಾ. 18ರಂದು ಬೆಳಿಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಆರ್.ಎಂ.ಸಿ. ಸಭಾಂಗಣದಲ್ಲಿ ಜರುಗಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ ತಿಳಿಸಿದ್ದಾರೆ.