ಮಡಿಕೇರಿ, ಸೆ. 15: ಸ್ವಾತಂತ್ರ್ಯೋತ್ಸವ ಅಂಗವಾಗಿ ಅಪಾಯದಲ್ಲಿದ್ದವರ ಪ್ರಾಣರಕ್ಷಣೆ ಮಾಡಿದ ಸಾಹಸಿಗರಿಗೆ ನೀಡಲಾಗುವ ಜೀವ ರಕ್ಷಕ ಪ್ರಶಸ್ತಿಯನ್ನು ಪಾಂಡನ ಶೈಲಜ ಮೊಣ್ಣಪ್ಪ ಪಡೆದುಕೊಂಡಿದ್ದಾರೆ.

ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮಾದಾಪುರ ಬಳಿಯ ಗರಗಂದೂರಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪ.ಪೂ. ಕಾಲೇಜಿನಲ್ಲಿ ಡಿ. ದರ್ಜೆ ನೌಕರಳಾಗಿ ಕೆಲಸ ಮಾಡುತ್ತಿರುವ ಶೈಲಜಾ ಅವರು ರಜೆ ಹಾಗೂ ಬಿಡುವಿನ ವೇಳೆಯಲ್ಲಿ ಮಡಿಕೇರಿಯಲ್ಲಿ ಆಟೋ ಚಾಲನೆ ಮಾಡುತ್ತಿದ್ದಾರೆ. ಆಟೋ ಚಾಲನೆ ಮಾಡುತ್ತಿದ್ದ ಸಂದರ್ಭ ಅಪಘಾತಕ್ಕೀಡಾಗಿ ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಯೋರ್ವರ ಜೀವ ಉಳಿಸುವಲ್ಲಿ ಇವರು ಪ್ರಯತ್ನಿಸಿದ್ದರು. ಈ ಕಾರಣಕ್ಕಾಗಿ ಪ್ರಶಸ್ತಿ ಲಭಿಸಿದೆ.