ಮಡಿಕೇರಿ, ಸೆ. 15: ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಬರೆದಿರುವ ``ಬಂದಲಕೆ’’ ಎಂಬ ನೂತನ ಕೊಡವ ಪುಸ್ತಕ ತಾ. 17 ರಂದು ಕೊಡವ ಮಕ್ಕಡ ಕೂಟದ ವತಿಯಿಂದ ಮಡಿಕೇರಿಯಲ್ಲಿ ಬಿಡುಗಡೆಯಾಗಲಿದೆ.

ಕೊಡವ ಮಕ್ಕಡ ಕೂಟದ `ಕೊಡವ ಸಾಹಿತ್ಯ ಮಾಲೆ’ಯ 5ನೇ ಪ್ರಕಟಣೆಯಾಗಿ ``ಬಂದಲಕೆ’’ ಹೊರ ಬರುತ್ತಿದೆ.

ತಾ. 17 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಕೊಡವ ಸಮಾಜದಲ್ಲಿ ನಡೆಯಲಿರುವ ಕೈಲ್‍ಪೊಳ್ದ್ ಸಂತೋಷ ಕೂಟ ಸಮಾರಂಭದಲ್ಲಿ ಈ ಕೃತಿ ಲೋಕಾರ್ಪಣೆಯಾಗಲಿದೆ. ಕೊಡವ ಸಮಾಜದ ಅಧ್ಯಕ್ಷ ಕೊಂಗಾಂಡ ಎಸ್. ದೇವಯ್ಯ ಅವರು ಕೃತಿಯನ್ನು ಬಿಡುಗಡೆ ಮಾಡಲಿದ್ದು, ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹಾಗೂ ಸುನಿಲ್ ಸುಬ್ರಮಣಿ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.