ಶನಿವಾರಸಂತೆ, ಸೆ. 18: ಸ್ಥಳೀಯ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ವತಿಯಿಂದ ಭಾನುವಾರ ಹಿಂದೂ ರುದ್ರಭೂಮಿ ಯಲ್ಲಿ ನಿರ್ಮಾಣ ವಾಗಿರುವ ನೂತನ ಚಿತಾಗಾರ ಹಾಗೂ ಪೂಜಾ ಕಟ್ಟೆಯ ಪೂಜಾ ಕಾರ್ಯಕ್ರಮ ನಡೆಯಿತು. ಮುದ್ದಿನ ಕಟ್ಟೆ ಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ಪುಟ್ಟರಾಜ್, ತಾಲೂಕು ಪಂಚಾಯಿತಿ ಸದಸ್ಯ ಬಿ.ಎಸ್. ಅನಂತಕುಮಾರ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹೆಚ್. ಬಿ. ಜಯಮ್ಮ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಪಿ. ಬೋಜಪ್ಪ ಹಾಗೂ ರಘು ಮಾತನಾಡಿದರು.

ಅಧ್ಯಕ್ಷತೆಯನ್ನು ಹಿಂದೂ ರುದ್ರಭೂಮಿ ಸಮಿತಿ ಅಧ್ಯಕ್ಷ ಕೆ.ಪಿ. ಶಿವಪ್ಪ ವಹಿಸಿದ್ದರು. ಸಮಿತಿ ನಿರ್ದೇಶಕ ದಿವಾಕರ್, ಮುದ್ದಿನಕಟ್ಟೆ ಮಠದ ಅರ್ಚಕ ಮೃತ್ಯುಂಜಯ ಹಿರೇಮಠ್, ಪಂಚಾಯಿತಿ ಸದಸ್ಯರಾದ ಎನ್.ಕೆ. ಸುಮತಿ, ನೇತ್ರಾವತಿ, ಕಮಲಮ್ಮ, ಧರ್ಮಸ್ಥಳ ಗ್ರಾಮಾ ಭಿವೃದ್ಧಿ, ಯೋಜನೆಯ ವಲಯ ಮೇಲ್ವಿಚಾರಕ ಸುಬ್ರಮಣಿ, ಈಶ್ವರ್, ಪ್ರಮುಖರಾದ ಬಿ.ಟಿ. ಸತೀಶ್, ರಂಜನ್, ಚಂದ್ರಶೇಖರ್ ಹಾಗೂ ಶಿಕ್ಷಕ ಯೋಗೇಶ್ ಮತ್ತಿತರರು ಉಪಸ್ಥಿತರಿದ್ದರು.