ಗೋಣಿಕೊಪ್ಪಲು, ಸೆ. 28: ಆಯುಧ ಪೂಜಾ ವಿಶೇಷವಾಗಿ ಇಲ್ಲಿನ ಕಾವೇರಿ ದಸರಾ ಸಮಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾ. 29ರಂದು (ಇಂದು) ಕೇರಳ ಕೊಚ್ಚಿನ್ ಕೈಲಾಸ್ ಮೆಲೋಡೀಸ್ ತಂಡದಿಂದ ಇಲ್ಲಿನ ಕಾವೇರಿ ಕಲಾ ವೇದಿಕೆಯಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ ರಾತ್ರಿ 8.30ಕ್ಕೆ ನಡೆಯಲಿದೆ.ಸಂಜೆ 6 ಗಂಟೆಯಿಂದ ವೀರಾಜಪೇಟೆ ನಾಟ್ಯ ಮಯೂರಿ ನೃತ್ಯ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮವಿದೆ.ಇಂದಿನ ಸಭಾ ಕಾರ್ಯಕ್ರಮ ಕುಲ್ಲಚಂಡ ಪ್ರಮೋದ್‍ಗಣಪತಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಜಿ.ಪಂ.ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮೂಕೋಂಡ ವಿಜು ಸುಬ್ರಮಣಿ, ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೋಂಡ ಶಶಿಸುಬ್ರಮಣಿ, ವೀರಾಜಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಕೊಲ್ಲೀರ ಬೋಪಣ್ಣ, ಗ್ರಾ.ಪಂ. ಉಪಾಧ್ಯಕ್ಷೆ ಸಿ.ಎಸ್.ಕಾವ್ಯ ಅಶ್ವಥ್, ಗ್ರಾ.ಪಂ.ಸದಸ್ಯರು, ಮಾಜಿ ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಬೋಪಣ್ಣ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಸವನ ಗೌಡ, ಪೆÇನ್ನಂಪೇಟೆ ಜೆಸಿಐ ಅಧ್ಯಕ್ಷ ಟಾಟು ಮೊಣ್ಣಪ್ಪ, ಗೋಣಿಕೊಪ್ಪಲು ಸಹಕಾರ ಬ್ಯಾಂಕ್ ಅಧ್ಯಕ್ಷ ಕುಪ್ಪಂಡ ವಿಜು ಚಿಟ್ಟಿಯಪ್ಪ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಅಧ್ಯಕ್ಷ ಸಿ.ಟಿ.ದೇವಯ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸದಾಶಿವ ಗೌಡ, ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಾಧ್ಯಕ್ಷ ಅಬ್ದುಲ್ ರೆಹಮಾನ್ ಬಾಪು, ಗೋಣಿಕೊಪ್ಪಲು ಎಸ್.ಎನ್.ಡಿ.ಪಿ. ಅಧ್ಯಕ್ಷ ಜಯೇಂದ್ರನ್, ಕಾವೇರಿ ದಸರಾ ಸಮಿತಿ ಮಾಜಿ ಕಾರ್ಯದರ್ಶಿ ಪಿ.ಎಸ್.ಲೋಕೇಶ್ ಹಾಗೂ ಗೋಣಿಕೊಪ್ಪಲು ಶಾಫಿ ಮಸೀದಿ ಮಾಜಿ ಅಧ್ಯಕ್ಷ ಸಿಪಿಎಂ ಬಷೀರ್ ಪಾಲ್ಗೊಳ್ಳಲಿದ್ದಾರೆ.