ಸೋಮವಾರಪೇಟೆ, ಸೆ. 28: ರೋಟರಿ ಸಂಸ್ಥೆಯ ವತಿಯಿಂದ ಇಲ್ಲಿನ ಅಲೋಕ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾಸಾಂತ್ಯ ಕೂಟ ಕಾರ್ಯಕ್ರಮದಲ್ಲಿ ನಾಲ್ವರು ಶಿಕ್ಷಕರನ್ನು ಸನ್ಮಾನಿಸಲಾಯಿತು.

ಮಸಗೋಡು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಟಿ.ಡಿ. ನರೇಂದ್ರನಾಥ್, ಶಾಂತಳ್ಳಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪರಮೇಶ್ವರ ಸ್ವಾಮಿ, ಮಾದ್ರೆ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ಸಿ.ಎಲ್. ಪುಟ್ಟರಾಜು, ಗೌಡಳ್ಳಿ ಶಾಲೆಯ ಶಿಕ್ಷಕಿ ಕೆ.ಬಿ. ಚಂದ್ರಕಲಾ ಅವರುಗಳನ್ನು ರೋಟರಿ ಪದಾಧಿಕಾರಿಗಳು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಟರಿ ಸಹಾಯಕ ರಾಜ್ಯಪಾಲ ಮಹೇಶ್ ಕುಮಾರ್ ಮಾತನಾಡಿ, ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಡಾ. ರಾಕೇಶ್ ಪಟೇಲ್ ವಹಿಸಿದ್ದರು. ಕಾರ್ಯದರ್ಶಿ ಪ್ರಕಾಶ್ ಕುಮಾರ್, ರೋಟರಿ ಲೇ. ಗವರ್ನರ್ ಮೋಹನ್ ರಾಂ, ನಿಕಟ ಪೂರ್ವ ಅಧ್ಯಕ್ಷ ಭರತ್ ಭೀಮಯ್ಯ, ಪದಾಧಿಕಾರಿ ಪ್ರೀತಮ್, ಸುಂದರ್ ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು.