ಚೆಟ್ಟಳ್ಳಿ, ಅ. 23: ಕೊಡಗಿನ ಪವಿತ್ರ ಕುಲದೇವಿ ಕಾವೇರಿ ತೀರ್ಥವನ್ನು ಎಲ್ಲರೂ ಪಡೆದು ಒಗ್ಗಟ್ಟಿನಿಂದ ಮಾತೆಯ ಆಶೀರ್ವಾದಕ್ಕೆ ಪಾತ್ರರಾಗೋಣವೆಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಹೇಳಿದರು.

ಚೆಟ್ಟಳ್ಳಿ ಪ್ರಾ.ಕೃ.ಪ. ಸಹಕಾರ ಸಂಘದಲ್ಲಿ 6ನೇ ವರ್ಷದ ಕಾವೇರಿ ತೀರ್ಥ ವಿತರಣಾ ಕಾರ್ಯಕ್ರಮವನ್ನು ತಾ. 17 ರಂದು ಸಂಜೆ 5 ಗಂಟೆಗೆ ಇಲ್ಲಿನ ಕಾವೇರಿ ಪ್ರತಿಮೆಗೆ ತೀರ್ಥ ಸ್ನಾನ ಮಾಡಿಸಿ ಪುರೋಹಿತರಿಂದ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ತೀರ್ಥ ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿಗಳು, ಸದಸ್ಯರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಜರಿದ್ದರು.