ಸಿದ್ದಾಪುರ, ಅ. 23: ದೇಶಕ್ಕೆ ಕಾಂಗ್ರೆಸ್ ಪಕ್ಷ ಅತ್ಯವಶ್ಯಕ ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಕ್ಷವನ್ನು ಸಂಘಟಿಸಬೇಕೆಂದು ರಾಜ್ಯ ಕಾಂಗ್ರೆಸ್‍ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ ಕರೆ ನೀಡಿದರು. ಸಿದ್ದಾಪುರ ವಲಯ ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು ಜಾತ್ಯತೀತ ಪಕ್ಷವಾಗಿದ್ದು, ಕಾರ್ಯಕರ್ತರು ಭಿನ್ನಾಬಿಪ್ರಾಯಗಳನ್ನು ಬಿಟ್ಟು ಪಕ್ಷದ ಸಂಘಟನೆಗಾಗಿ ದುಡಿಯಬೇಕೆಂದು ಕಿವಿ ಮಾತು ಹೇಳಿದರು. ಜಿಲ್ಲಾ ಕಾಂಗ್ರೆಸ್‍ನ ಕಾರ್ಯದರ್ಶಿ ಎಂ.ಎಸ್. ವೆಂಕಟೇಶ್ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸಬೇಕೆಂದರು.

ವೀರಾಜಪೇಟೆ ಬ್ಲಾಕ್ ಕಾರ್ಯದರ್ಶಿ ಪಿ.ವಿ. ಜಾನ್ಸ್‍ನ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಿದ್ದಾಪುರ ವಲಯ ಅಧ್ಯಕ್ಷ ವಿ.ಕೆ. ಬಷೀರ್, ಜಿಲ್ಲಾ ಮುಖಂಡರಾದ ಕೆ. ಉಸ್ಮಾನ್ ಹಾಜಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ದೇವಯಾನಿ ಇನ್ನಿತರರು ಹಾಜರಿದ್ದರು.